Mysore tatayya image

ಗ್ಯಾಲರಿ

ಸುದ್ದಿ ಹಾಗೂ ಕಾರ್ಯಕ್ರಮಗಳು

ಕಾರ್ಯಕ್ರಮ :
ತಾತಯ್ಯ ನವರ ಜನ್ಮದಿನಾಚರಣೆ ಹಾಗೂ ವೆಬ್ ಸೈಟ್ ಲೋಕಾರ್ಪಣೆ : ಸೆಪ್ಟೆಂಬರ್ ೧೧, ೨೦೧೧ , ಶಾರದಾವಿಲಾಸ ಸಭಾಂಗಣ , ಮೈಸೂರು ಮುಂದೆ ಓದಿ

ಶ್ರೀ ವೆಂಕಟ ಕೃಷ್ಣಯ್ಯ ನವರ ಸಾರ್ವಜನಿಕ ಸೇವೆ ಹಾಗೂ ಅಸ್ಪೃಶ್ಯತಾ ನಿವಾರಣೆ ಮತ್ತು ದೀನ ದಲಿತರ ಬಗೆಗಿನ ಅವರ ಕಾಳಜಿಯ ಪ್ರಯತ್ನಗಳು ನನ್ನ ಮನಸ್ಸು ಗೆದ್ದಿವೆ . ನಾನು ಅವರನ್ನು 'ಮೈಸೂರಿನ ಭೀಷ್ಮ ' ನೆಂದು ಪ್ರಶಂಸಿಸುವೆ . ಮೈಸೂರಿನ ಜನತೆಯಲ್ಲಿ ಅವರು 'Grand old man of Mysore' ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ .

– ಮಹಾತ್ಮಾ ಗಾಂಧಿ

ಶುದ್ಧ, ನಿಷ್ಕಳಂಕ ಜೀವನ ಹಾಗೂ ಸಾಮಾಜಿಕ ಸೇವೆಗೆ ಪ್ರಸಿದ್ಧರಾಗಿರುವ ಶ್ರೀ ವೆಂಕಟಕೃಷ್ಣಯ್ಯ ನವರು ಮೈಸೂರು ಪ್ರಾಂತ್ಯದ ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ನಿಸ್ವಾರ್ಥವಾಗಿ ದುಡಿದಿದ್ದಾರೆ. ಅವರ ಸರಳತೆ ಹಾಗೂ ಸಾಮಾಜಿಕ ಕಾಳಜಿಯ ಕಾರಣದಿಂದ ಮೈಸೂರಿನ ಜನತೆ ಅವರನ್ನು 'ತಾತಯ್ಯ' ಎಂದು ಪ್ರೀತಿಯಿಂದ ಕರೆದು ಗೌರವಿಸಿದೆ.

– ದಿವಂಗತ ಶ್ರೀ ಚಾಮರಾಜ ಒಡೆಯರ್, ಮೈಸೂರಿನ ಮಹಾರಾಜರು

ಜನತೆಯ ಹಿತಕ್ಕಾಗಿ ಜೀವಾವಧಿ ಸೇವೆ ಮಾಡಿರುವ ವೆಂಕಟಕೃಷ್ಣಯ್ಯನವರ ದೇಶಾಭಿಮಾನ, ಸಾರ್ವಜನಿಕ ಸೇವಾವೃತ್ತಿ ಮತ್ತು ಸ್ವಾರ್ಥತ್ಯಾಗ ಇವುಗಳ ಬಗ್ಗೆ ಗೌರವ ಅಭಿಮಾನವನ್ನು ಹೊಂದಿರುವವರ ಪೈಕಿ ನಾನು ಯಾರಿಗೂ ಹಿಂದಿಲ್ಲ. ಮೈಸೂರಿನಲ್ಲಿ ನನ್ನ ಅಧಿಕಾರ ಸೇವಾವಧಿಯಲ್ಲಿ ಅವರು ನನಗೆ ಇತ್ತ ಬೆಂಬಲದ ಕೃತಜ್ಞತಾಪೂರ್ವಕ ನೆನಪುಗಳು ನನ್ನಲ್ಲಿ ಎಂದಿಗೂ ಉಳಿಯುವುವು.

– ಎಂ. ವಿಶ್ವೇಶ್ವರಯ್ಯನವರು :

ಮೈಸೂರಿನ ಜನತೆಯಲ್ಲಿ ಸ್ವಾತಂತ್ರ್ಯದ ಬಗೆಗಿನ ಜಾಗೃತಿ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಶ್ರೀ ವೆಂಕಟಕೃಷ್ಣಯ್ಯನವರ ಪಾತ್ರ ಅತ್ಯಂತ ಮಹತ್ವಪೂರ್ಣವಾದುದು. ಮೈಸೂರು ಪ್ರಾಂತ್ಯದ ಸಾಮಾಜಿಕ ಹಾಗೂ ಅರ್ಥಿಕ ಬೆಳವಣಿಗೆಗೆ ಅವರು ಅವಿಶ್ರಾಂತವಾಗಿ ದುಡಿದವರು.

– ಶ್ರೀ ವಿ.ವಿ. ಗಿರಿ, ಭಾರತದ ಮಾಜಿ ರಾಷ್ಟ್ರಪತಿಗಳು

The Anathalaya website